ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ “ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ”

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ “ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ”

ನೇಸರ ಆ.06: ನಮ್ಮ ದೇಶಾದ್ಯಂತ ಆಜ್ಹಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ನಡೆಯುತ್ತಿರುವ ಈ ವಿಶೇಷ ಸಂದರ್ಭದಲ್ಲಿ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು ಹಾಗೂ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ದಳದ ಸದಸ್ಯರು, ಕೊಡಂಗೆ ತರವಾಡು ಜಯರಾಮ ನಾೈಕ್ ಇವರ ಗದ್ದೆಯಲ್ಲಿ ನೇಜಿ ನಾಟಿ ಮಾಡುವ ಮೂಲಕ “ನಮ್ಮ ಚಿತ್ತ ಕೃಷಿಯತ್ತ” ಎಂಬ ಮಾತಿನೆಡೆಗೆ ಹೆಜ್ಜೆ ಇರಿಸಿದರು. ಶಿಕ್ಷಕ ಶಿಕ್ಷಕೇತರ ವೃಂದದವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿಲಾಗಿತ್ತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈಯವರು ದೀಪ ಬೆಳಗಿಸಿ ನಾಟಿಗೆ ಚಾಲನೆ ನೀಡಿ, ಕೃಷಿ ಪ್ರಧಾನವಾದ ನಮ್ಮ ದೇಶದಲ್ಲಿ ಈಗೀಗ ಕೃಷಿಯ ಬಗ್ಗೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಆಸಕ್ತಿ ಮೂಡಿಸಿಕೊಳ್ಳುತ್ತಿರುವುದು ಸಂತಸದ ವಿಷಯ ಎಂದರು. ಕೊಡಂಗೆ ಕುಟುಂಬದ ಹಿರಿಯರಾದ ಜಯರಾಮ ನಾೈಕ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿವೇಕಾನಂದ ಸ್ಕೌಟ್ಸ್ ಮತ್ತು ನಿವೇದಿತಾ ಗೈಡ್ಸ್ ವಿದ್ಯಾರ್ಥಿಗಳು ಭಾಗವಹಿಸಿದ ಈ ಕಾರ್ಯದಲ್ಲಿ ಸ್ಥಳೀಯರ ಜೊತೆಗೆ ರೂಪೇಶ್, ಶ್ರೀಮತಿ ಜ್ಯೋತಿ ರೂಪೇಶ್, ಕುಮಾರಿ ಸಾನ್ವಿ ಇವರು ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಗೆ ಪಾನೀಯ ಮತ್ತು ಉಪಾಹಾರದ ವ್ಯವಸ್ಥೆ ಮಾಡಿ ಸಹಕರಿಸಿದರು.

Leave a Reply

You May Have Missed

error: Content is protected !!