ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ನೆಲ್ಯಾಡಿಯ ಅಕ್ಷಯ್ ರಾಜ್ಯ ಮಟ್ಟಕ್ಕೆ ಆಯ್ಕೆ

ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ನೆಲ್ಯಾಡಿಯ ಅಕ್ಷಯ್ ರಾಜ್ಯ ಮಟ್ಟಕ್ಕೆ ಆಯ್ಕೆ

ನೆಲ್ಯಾಡಿ : ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ನೆಲ್ಯಾಡಿಯ 7 ನೇ ತರಗತಿಯ ವಿದ್ಯಾರ್ಥಿ ಅಕ್ಷಯ್ ಅಶೋಕ್ ರವರು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ 100 ಮೀ..ಓಟದಲ್ಲಿ ದ್ವಿತೀಯ ಸ್ಥಾನ ಹಾಗೂ 200 ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ತಾಲ್ಲೂಕು ಹಾಗೂ ವಲಯ ಮಟ್ಟದ ಕ್ರೀಡಾಕೂಟದಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾರೆ.ಇವರು ಬೆಳ್ತಂಗಡಿ ತಾಲ್ಲೂಕಿನ ಶಿಬಾಜೆ ಗ್ರಾಮದ ಕುರುಂಬು ನಿವಾಸಿ ಅಶೋಕಾನಂದ ಮತ್ತು ಆಶಾ ದಂಪತಿಯವರ ಪುತ್ರ .

ರಾಜ್ಯ ಹೆದ್ದಾರಿ ಬದಿಯ ಅನಧಿಕೃತ ಅಂಗಡಿಗಳನ್ನು ಜಿಲ್ಲಾಧಿಕಾರಿ ಸೂಚನೆಯಂತೆ ಲೋಕೋಪಯೋಗಿ ಇಲಾಖೆಯ ವತಿಯಿಂದ ತೆರವು ಕಾರ್ಯ

Leave a Reply

You May Have Missed

error: Content is protected !!