ಅಂಗಡಿಯಿಂದ ಹೊರಗೆ ಎಳೆದು ಗೂಂಡಾಗಿರಿ

ಅಂಗಡಿಯಿಂದ ಹೊರಗೆ ಎಳೆದು ಗೂಂಡಾಗಿರಿ

ಜಾಗದ ವಿಚಾರವಾಗಿ ಬಜರಂಗದಳ ಮುಖಂಡ ಮತ್ತು ತಂಡ ಅಂಗಡಿಗೆ ನುಗ್ಗಿ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಜಿನ ಉಪ್ಪಿನಂಗಡಿ ಪೇಟೆಯಲ್ಲಿ ನಡೆದಿದೆ. ಅಂಗಡಿಯಿಂದ ಹೊರಗೆಳೆದು ನಡುರಸ್ತೆಯಲ್ಲಿ ನಾಲ್ವರ ಮೇಲೆ ಹಲ್ಲೆಗೈದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಜರಂಗದಳ ಮುಖಂಡ, ಭರತ್ ಕುಮ್ಡೇಲು, ಬಜರಂಗದಳದ ಜಗಜೀವನ್ ರೈ, ಭವಿಷ್, ಸಂದೀಪ್ ಎಂಬವರು ಅಂಗಡಿಗೆ ನುಗ್ಗಿ ಹರೀಶ ನಾಯ್ಕ, ಸುದರ್ಶನ್ ಕುಮಾರ್, ರಮಾನಂದ ಎಂಬವರನ್ನು ಹೊರಗೆಳೆದು ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಎಸ್​ಸಿ ಎಸ್​ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Leave a Reply

You May Have Missed

error: Content is protected !!