ಫಾ.ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

ಫಾ.ಆದರ್ಶ್ ಜೋಸೆಫ್ ಅವರಿಗೆ ಹ್ಯೂಮನಿಟೆರಿಯನ್ ಎಕ್ಸಲೆನ್ಸ್ ಅವಾರ್ಡ್

ನೆಲ್ಯಾಡಿ: ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಹಾಗೂ ಹ್ಯೂಮನಿಟೆರಿಯನ್ ದಿನದ ಪ್ರಯುಕ್ತ ಹ್ಯೂಮನಿಟೆರಿಯನ್ ಸಂಸ್ಥೆಯ ವತಿಯಿಂದ ಸಮಾಜಕ್ಕೆ ನೀಡದ ವಿವಿಧ ಸಮಾಜ ಸೇವೆಯನ್ನು ಪರಿಗಣಿಸಿ ಫಾ.ಆದರ್ಶ್ ಜೋಸೆಫ್ ಅವರಿಗೆ “ಹ್ಯೂಮನಿಟೀರಿಯನ್ ಎಕ್ಸಲೆನ್ಸ್ ಅವಾರ್ಡ್ 2024” ನೀಡಿ ಗೌರವಿಸಲಾಯಿತ್ತು.

ಕೇಂದ್ರ ಸರಕಾರದ ಮಾಜಿ ಸಚಿವ ಸಂತೋಷ್ ಬಗ್ರೋಡಿಯಾ ಹಾಗೂ ಕಿರು ತೆರೆ ನಟ ಸುರೇಂದ್ರ ಪಾಲ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ಕೋವಿಡ್ 19ರ ಸಂದರ್ಭದಲ್ಲಿ ಗ್ರಾಮ ಮಟ್ಟದಲ್ಲಿ ಮಾಡಿದ ಸಮಾಜಸೇವೆಯನ್ನು ಸಂಸ್ಥೆ ಶ್ಲಾಘಸಿದರು. ತನ್ನ ವಯುಕ್ತಿಕ ವಾಹನದಲ್ಲಿ ನೂರಕ್ಕೂ ಅಧಿಕ ಕೋವಿಡ್ ರೋಗಿಗಳನ್ನು ಆಸ್ಪತ್ರೆ ಹಾಗೂ ಕೋವಿಡ್ ಸೆಂಟರ್ ಗಳಿಗೆ ಉಚಿತವಾಗಿ ರವಾನೆ ಮಾಡುವುದರ ಮೂಲಕ ಹಲವಾರು ಜನರ ಪ್ರಾಣ ಉಳಿಸುವಲ್ಲಿ ಯಶ್ವಸಿಯಾದರು. ಅದು ಅಲ್ಲದೆ ಹತ್ತು ಹಲವಾರು ಸಮಾಜಮುಖಿ ಕಾರ್ಯಕ್ರಮದಲ್ಲಿ ತನ್ನನೇ ತೊಡಗಿಸಿಕೊಂಡು ಜಾತಿ, ಧರ್ಮ ವ್ಯೆತ್ಯಾಸವಿಲ್ಲದೆ ಮಾಡುವ ಮಾನವ ಸೇವೆಯನ್ನು ಸಂಸ್ಥೆ ಗುರುತಿಸಿಕೊಂಡರು. ಧರ್ಮದ ಅಂತರ ಬಿಟ್ಟು ಎಲ್ಲರೊಂದಿಗೆ ಸೇರಿ ಕೆಲಸಮಾಡುವ ಸಾಮಾಜಿಕ ಕಾಳಜಿಯಿಂದ ಸರ್ವ ಧರ್ಮ ಸಮನ್ವಯದ ಹರಿಕಾರ ಎಂದೇ ಗುರುತಿಸಿಕೊಂಡು ಹಲವಾರು ಕಾರ್ಯಕ್ರಮದ ಮೂಲಕ ಸೌಹಾರ್ದತೆಯ ಸಂದೇಶವನ್ನು ಸಮಾಜಕ್ಕೆ ಸಾರುವಲ್ಲಿಯೂ ಪ್ರಮುಖ ಪಾತ್ರ ವಹಿಸುತ್ತಾರೆ.

ಪ್ರಸ್ತುತ ಬೆಳ್ತಂಗಡಿ ಧರ್ಮ ಪ್ರಾಂತ್ಯದ ಗುತ್ತಿಗಾರು ಹಾಗೂ ನೆಟ್ಟಣ ಚರ್ಚಿನ ಧರ್ಮಗುರುಗಳಾಗಿ ಸೇವೆ ಸಲ್ಲಿಸುತಾರೆ.

Leave a Reply

You May Have Missed

error: Content is protected !!