ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

ಉತ್ತರ ಪ್ರದೇಶದ ಹತ್ರಾಸ್‌ನ ಖಾಸಗಿ ಶಾಲೆಯೊಂದರಲ್ಲಿ ಕೆಲ ತಿಂಗಳ ಹಿಂದೆ 2ನೇ ತರಗತಿ ವಿದ್ಯಾರ್ಥಿಯೊಬ್ಬನ ಮೃತದೇಹ ಪತ್ತೆಯಾಗಿತ್ತು. ಶಾಲೆಯ ಯಶಸ್ಸಿಗಾಗಿ ಮಾಟ-ಮಂತ್ರ ಮಾಡಿ, ಶಾಲೆಯ ಮ್ಯಾನೇಜರ್‌ ಮಗುವನ್ನು ಬಲಿ ನೀಡಿದ್ದಾನೆ ಎಂದೂ ಹೇಳಲಾಗಿತ್ತು. ಆದರೆ, ಈ ಪ್ರಕರಣಕ್ಕೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ.

ವಿದ್ಯಾರ್ಥಿಯನ್ನು ಬಲಿ ನೀಡಲಾಗಿಲ್ಲ. ಬದಲಿಗೆ ಅದೇ ಶಾಲೆಯ ವಿದ್ಯಾರ್ಥಿಯೊಬ್ಬ ರಜೆಗಾಗಿ ಮಗುವನ್ನು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯಾಯಾಲಯಕ್ಕೆ ಸಲ್ಲಿಸಿರುವ ಚಾರ್ಜ್‌ ಶೀಟ್‌ನಲ್ಲಿ ಈ ವಿಷಯ ಉಲ್ಲೇಖೀಸಿ, ಶಾಲೆಯ ವಿದ್ಯಾರ್ಥಿ ಸತ್ತರೆ ಶಾಲೆಗಳು ರಜೆ ಘೋಷಿಸುತ್ತವೆ ಎಂಬುದಕ್ಕಾಗಿ 8ನೇ ತರಗತಿ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  •  

Leave a Reply

You May Have Missed

error: Content is protected !!