ಬೈಕ್ ಮಗುಚಿ ಸವಾರ ಸಾವು


ಬೆಳ್ತಂಗಡಿ: ಇಲ್ಲಿಯ ಚರ್ಚ್ ರೋಡ್ ನ ಕಲ್ಕಣಿ ಎಂಬಲ್ಲಿ ಕಾರನ್ನು ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ರಸ್ತೆ ಬದಿಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಸವಾರ ಸಾವನ್ನಪ್ಪಿದ ಘಟನೆ ಮಾ.26 ರಂದು ನಡೆದಿದೆ.
ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ(42) ಮೃತಪಟ್ಟವರು.
ಸಯ್ಯದ್ ಪಾಶ ಅವರು ತಮ್ಮ ಬೈಕ್ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





















Leave a Reply