ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ – ರೇವತಿಯವರಿಗೆ ಮಾತೃಶ್ರೀ ಹೇಮಾವತಿ ಅಮ್ಮನವರಿಂದ ಆಶೀರ್ವಾದ

Dharmasthala

ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ – ರೇವತಿಯವರಿಗೆ ಮಾತೃಶ್ರೀ ಹೇಮಾವತಿ ಅಮ್ಮನವರಿಂದ ಆಶೀರ್ವಾದ

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕು ಶಾಖೆಯ ಮಾತೃಶ್ರೀ ಅಮ್ನನವರ ಕನಸಿನ ‘ವಾತ್ಸಲ್ಯ’ ಕಾರ್ಯಕ್ರಮದಡಿಯಲ್ಲಿ, ಪ್ರತಿದಿನ ಮಾಶಾಸನ ಪಡೆಯುತ್ತಿರುವ ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯರಾದ ರೇವತಿ ಅವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿ ಹಸ್ತಾಂತರಿಸಲಾಯಿತು.

ಈ ವಾತ್ಸಲ್ಯ ಮನೆಯನ್ನು ಮಾತೃಶ್ರೀ ಹೇಮಾವತಿ ಅಮ್ಮನವರು ಹಾಗೂ ಮಾತೃಶ್ರೀ ಶ್ರದ್ದಾ ಅಮಿತ್ ರವರು ರೇವತಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೇವತಿ ಮಾತನಾಡುತ್ತಾ, “ನಾನು ಗಂಡನನ್ನು ಕಳೆದುಕೊಂಡು ಮನೆ ಬಿದ್ದು ಹೋಗಿ, ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ಜೀವನ ಸಾಗಿಸುತ್ತಿದ್ದೆ. ಈ ಸಂದರ್ಭಕ್ಕೆ ಮಾಶಾಸನ, ಮಕ್ಕಳ ವಿದ್ಯಾಭ್ಯಾಸಕ್ಕೆ ವಾತ್ಸಲ್ಯ ನಿಧಿ, ಹಾಗೂ ಈಗ ನಿರ್ಮಾಣವಾದ ವಾತ್ಸಲ್ಯ ಮನೆ ಇವುಗಳಿಂದ ನನಗೆ ತಾಯಿಯ ಪ್ರೀತಿ, ದೇವತೆಯ ಸಾಂತ್ವನ ಸಿಕ್ಕಂತಾಗಿದೆ. ಮಾತೃಶ್ರೀ ಅಮ್ಮನವರಿಗೆ ದೇವರು ಉತ್ತಮ ಆರೋಗ್ಯ ಕೊಟ್ಟು ಕಾಪಾಡಲಿ” ಎಂದು ಭಾವೋದ್ರೇಕದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿಯವರಾದ ಡಾ.ಹರೀಶ್ ಕೃಷ್ಣಸ್ವಾಮಿ, ನಿವೃತ್ತ ಪ್ರಾದೇಶಿಕ ನಿರ್ದೇಶಕರಾದ ಮಹಾವೀರ ಅಜ್ರಿ, ತಾಲೂಕು ಜನಜಾಗೃತಿ ವೇದಿಕೆಯ ಸದಸ್ಯರಾದ ಚೆನ್ನಪ್ಪ ಗೌಡ ಹಾಗೂ ಅವಿನಾಶ್ ಬಿಡೆ, ಜ್ಞಾನ ವಿಕಾಸ ವಿಭಾಗದ ನಿರ್ದೇಶಕರಾದ ವಿಠಲ ಪೂಜಾರಿ, ಜ್ಞಾನ ವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಅಮೃತ್, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಮೇಲ್ವಿಚಾರಕರು ಮತ್ತು ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

  •  

Leave a Reply

You May Have Missed

error: Content is protected !!