ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ

ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ

ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ

ಶಿಕ್ಷಕ ಆನಂದ ಅಜಿಲರಿಗೆ ‘ಸಾವಿತ್ರಿಬಾಯಿ ಫುಲೆ’ ಪ್ರತಿಷ್ಠಿತ ರಾಜ್ಯ ಪ್ರಶಸ್ತಿ

ನೆಲ್ಯಾಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಆಶ್ರಯದಲ್ಲಿ ಬೆಂಗಳೂರಿನ ತ್ರಿಪುರವಾಸಿನಿ, ಅರಮನೆ ಮೈದಾನದಲ್ಲಿ ಫೆ.28ರಂದು ನಡೆದ ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ ಹಾಗೂ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕಡಬ ಮಾದರಿ ಶಾಲೆಯ ಮುಖ್ಯ ಶಿಕ್ಷಕ ಆನಂದ ಅಜಿಲರಿಗೆ ಈ ವರ್ಷದ ಅತ್ಯಂತ ಪ್ರತಿಷ್ಠಿತ ‘ಸಾವಿತ್ರಿಬಾಯಿ ಫುಲೆ’ ರಾಜ್ಯ ಪ್ರಶಸ್ತಿ ಪ್ರದಾನಿಸಿ ಗೌರವಿಸಲಾಯಿತು.

ರಾಜ್ಯದ ಶೈಕ್ಷಣಿಕ ವಲಯದಲ್ಲಿ ಬೋಧನೆ, ವಿದ್ಯಾರ್ಥಿಗಳ ಹಾಗೂ ಶಾಲೆಯ ಸಮಗ್ರ ಅಭಿವೃದ್ಧಿ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಮೂಲಕ ನೀಡಿದ ಅತ್ಯುನ್ನತ ಸೇವೆಯನ್ನು ಪರಿಗಣಿಸಿ ಈ ಗೌರವ ರಾಜ್ಯ ಮಟ್ಟದಲ್ಲಿ ಅವರಿಗೆ ಲಭಿಸಿದೆ.

ಸಮ್ಮೇಳನದ ಪ್ರಮುಖ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಶಿಕ್ಷಣ ಸಚಿವರು ಸೇರಿದಂತೆ ಅನೇಕ ಗಣ್ಯರು ಸೇರಿಕೊಂಡು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

Leave a Reply

You May Have Missed

error: Content is protected !!