ಉಜಿರೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ಉಜಿರೆ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು

ನೇಸರ ಜು.27: ಕಾಯಿ ಕೀಳಲು ತೆಂಗಿನಮರಕ್ಕೆ ಹತ್ತಿದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಉಜಿರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಉಜಿರೆ ಗ್ರಾಮದ ನಿನ್ನಿಕಲ್ಲು ಪಾಲೆಂಜ ಎಂಬಲ್ಲಿಯ ನಿವಾಸಿ ಆನಂದ(40) ಮೃತಪಟ್ಟ ದುರ್ದೈವಿ. ತೆಂಗಿನ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ. ಅಡಕೆಗೆ ಔಷಧಿ ಸಿಂಪಡಿಸುವ, ತೆಂಗಿನಕಾಯಿ ಕೀಳುವ ಹಾಗೂ ಇತರ ಕೆಲಸಗಳೊಂದಿಗೆ ಅವರು ಚಾಲಕರಾಗಿಯು ದುಡಿಯುತ್ತಿದ್ದರು.
ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

Previous post

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರ ಹೆಸರು ಚಿರಸ್ಥಾಯಿಯಾಗಿ ಉಳಿಯುವುದು – ಎಸ್.ಕೇಶವಾಚಾರಿ

Next post

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ<br>ಬಿಲ್ಲವ ಸಂಘಟನೆಗಳಿಂದ ಮಾನವ ಸರಪಳಿ ರಚಿಸಿ ಮೌನ ಪ್ರತಿಭಟನೆ

Leave a Reply

You May Have Missed

error: Content is protected !!