ಶಾಲಾ ಆವರಣದೊಳಗಿನ ವಿದ್ಯುತ್ ಕಂಬ ಹಾಗೂ ತಂತಿ ತೆರವುಗೊಳಿಸಲು ಪೋಷಕರ ಆಗ್ರಹ

ಶಾಲಾ ಆವರಣದೊಳಗಿನ ವಿದ್ಯುತ್ ಕಂಬ ಹಾಗೂ ತಂತಿ ತೆರವುಗೊಳಿಸಲು ಪೋಷಕರ ಆಗ್ರಹ

ಕೊಕ್ಕಡ:ಶಾಲಾ ಆವರಣದೊಳಗೆ ವಿದ್ಯುತ್ ಕಂಬ ಹಾಗೂ ಜೋತು ಬಿದ್ದಿರುವ ತಂತಿಗಳು ವಿದ್ಯಾರ್ಥಿಗಳಿಗೆ ಅಪಾಯವನ್ನು ತಂದೊಡ್ಡುವ ಸಾಧ್ಯತೆ ಇದ್ದು ಕೂಡಲೇ ಇದನ್ನು ತೆರವುಗೊಳಿಸಿ ಭಯ ಮುಕ್ತ ವಾತಾವರಣವನ್ನು ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಕಲ್ಪಿಸಬೇಕೆಂದು ಕೊಕ್ಕಡ ಗ್ರಾಮದ ಉಪ್ಪಾರಪಳಿಕೆಯ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಪೋಷಕು ಮೆಸ್ಕಾಂ ಇಲಾಖೆಗೆ ಆಗ್ರಹಿಸಿದ್ದಾರೆ.

ಕಳೆದ ಹಲವು ತಿಂಗಳುಗಳಿಂದಲೂ ಈ ಬಗ್ಗೆ ಮೆಸ್ಕಾಂ ಇಲಾಖಾ ಅಧಿಕಾರಿಗಳಿಗೆ ದೂರು ನೀಡಿದರೂ ಇದುವರೆಗೆ ತಂತಿಗಳ ತೆರವಿನ ಕಾರ್ಯ ನಡೆದಿಲ್ಲ. ಅಲ್ಲದೆ ಆವರಣದೊಳಗಿರುವ ವಿದ್ಯುತ್ ಕಂಬದಿಂದ ಸ್ಥಳೀಯ ಮನೆಗಳಿಗೆ ಸಂಪರ್ಕ ನೀಡಲಾಗಿದ್ದು, ಕೆಲವೆಡೆ ವಿದ್ಯಾರ್ಥಿಗಳ ಕೈಗೆಟಕುವಂತೆ ಅಪಾಯಕಾರಿ ತಂತಿಗಳಿವೆ ಎಂದು ಪೋಷಕರು ಅಸಮಾಧಾನಗೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮೆಸ್ಕಾಂನ ಉಜಿರೆ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕ್ಲೆಮೆಂಟ್ ಬೆಂಜಮಿನ್ ಬ್ರಾಗ್ಸ್ ಶೀಘ್ರವೇ ಸ್ಥಳ ಪರಿಶೀಲನೆ ನಡೆಸಿ ಕಾರ್ಯ ಪ್ರವೃತ್ತರಾಗುವುದಾಗಿ ತಿಳಿಸಿದ್ದಾರೆ.

Previous post

ಅಕ್ರಮ ಹೆಬ್ಬಲಸು ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದ ವಾಹನವನ್ನು ಮಡಿಕೇರಿಯಲ್ಲಿ ವಶಕ್ಕೆ ಪಡೆದ ಉಪ್ಪಿನಂಗಡಿಯ ಅರಣ್ಯಾಧಿಕಾರಿಗಳು

Next post

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಭೇಟಿಯಾಗಿ ಧನ್ಯವಾದ ಅರ್ಪಿಸಿದ ದಿವಂಗತ ಪ್ರವೀಣ್ ನೆಟ್ಟಾರ್ ಧರ್ಮಪತ್ನಿ ನೂತನ

Leave a Reply

You May Have Missed

error: Content is protected !!