ಗುರುವಾಯನಕೆರೆ: “ದೀಪಾವಳಿ ದೋಸೆ ಹಬ್ಬದ” ಪ್ರಯುಕ್ತ ಪೂರ್ವಭಾವಿ ಸಭೆ

ಗುರುವಾಯನಕೆರೆ: “ದೀಪಾವಳಿ ದೋಸೆ ಹಬ್ಬದ” ಪ್ರಯುಕ್ತ ಪೂರ್ವಭಾವಿ ಸಭೆ

ಬೆಳ್ತಂಗಡಿ: ಬೆಳ್ತಂಗಡಿ ಮಂಡಲ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆಯುವಂತಹ “ದೀಪಾವಳಿ ದೋಸೆ ಹಬ್ಬದ” ಪ್ರಯುಕ್ತ ಕುವೆಟ್ಟು, ನಾರಾವಿ, ಅಳದಂಗಡಿ ಕಣಿಯೂರು ಮಹಾಶಕ್ತಿ ಕೇಂದ್ರದ ಪ್ರಮುಖರ ಪೂರ್ವಭಾವಿ ಸಭೆ ಗುರುವಾಯನಕೆರೆಯ ಕುಲಾಲ ಮಂದಿರದಲ್ಲಿ ನಡೆಯಿತು.

ವೇದಿಕೆಯಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜ, ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀನಿವಾಸ್ ರಾವ್, ಗಣೇಶ್ ಗೌಡ, ಉಪಾಧ್ಯಕ್ಷರಾದ ಸೀತಾರಾಮ್ ಬೆಳಾಲು ಯುವ ಮೋರ್ಚಾ ಅಧ್ಯಕ್ಷರಾದ ಯಶವಂತ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕುಲಾಲ್, ವಿನೀತ್ ಕೋಟ್ಯಾನ್ ಹಾಗೂ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು, ಸಿ.ಎ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರು, ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ, ಯುವಮೋರ್ಚಾ ಪದಾಧಿಕಾರಿಗಳು, ಸದಸ್ಯರು ಗಳು ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!