ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಸಾದ್ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೆಂಕಟೇಶ್ ಪ್ರಸಾದ್ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆ

ಪುತ್ತೂರು: ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ಹಿರಿಯರ ಕ್ರೀಡಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥಾ ಕ್ರೀಡಾಂಗಣದಲ್ಲಿ ನಡೆದ ಹಿರಿಯರ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ಪ್ರಥಮ, ಉದ್ದ ಜಿಗಿತ ಮತ್ತು ಜಾವೆಲಿನ್ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ನವೆಂಬರ್ 27ರಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆಯುವ ಜಿಲ್ಲಾ ಮಟ್ಟದ ಹಿರಿಯರ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈಯವರು ತಿಳಿಸಿದ್ದಾರೆ

Leave a Reply

You May Have Missed

error: Content is protected !!