ಹಂಪಿ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು

ಕೊಕ್ಕಡ : ಹಂಪಿ ಹೇಮಕೂಟ ಗಾಯತ್ರಿ ಪೀಠದ ಜಗದ್ಗುರು ಶ್ರೀ ದಯಾನಂದಪುರಿ ಮಹಾಸ್ವಾಮಿಗಳು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಆಡಳಿತ ಸಮಿತಿಯ ವತಿಯಿಂದ ಗೌರವಿಸಲಾಯಿತು. ಬಳಿಕ ಈ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಕ್ಷೇತ್ರದ ವತಿಯಿಂದ ಸ್ವಾಮೀಜಿಯವರನ್ನು ಗೌರವಿಸಿದರು.

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ದೇವಸ್ಥಾನದ ಅರ್ಚಕರು ಸ್ವಾಮೀಜಿಯವರನ್ನು ಗೌರವಿಸಿದರು.
ಸಂದರ್ಭದಲ್ಲಿ ಸ್ವಾಮೀಜಿಯವರ ಅನುಯಾಯಿಗಳು ಹಾಗೂ ಕೊಕ್ಕಡದ ಕೃಷಿಕ ತುಕ್ರಪ್ಪ ಶೆಟ್ಟಿ ನೂಜೆ ಉಪಸ್ಥಿತರಿದ್ದರು.
ಬಳಿಕ ಸ್ವಾಮೀಜಿಯವರು ನೂಜೆ ತುಕ್ರಪ್ಪ ಶೆಟ್ಟಿ ಅವರ ಮನೆಗೆ ತೆರಳಿ ಆಶೀರ್ವದಿಸಿ, ಉಪಹಾರ ಸೇವಿಸಿ ತೆರಳಿದರು.



















Leave a Reply