ಬಿಜೆಪಿ ಕಾರ್ಯಕರ್ತ ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು

ಬಿಜೆಪಿ ಕಾರ್ಯಕರ್ತ ಚುನಾವಣಾ ಪ್ರಚಾರ ವೇಳೆ ಕುಸಿದು ಬಿದ್ದು ಸಾವು

ಪುಂಜಾಲಕಟ್ಟೆ: ಮನೆ, ಮನೆ ಚುನಾವಣಾ ಪ್ರಚಾರಕ್ಕೆಂದು ತೆರಳಿದ್ದ ಬಿಜೆಪಿ ಕಾರ್ಯಕರ್ತರೋರ್ವರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಗ್ರಾಮದ ಕಲಾಯಿ ಎಂಬಲ್ಲಿ ಸಂಭವಿಸಿದೆ. ವೃತ್ತಿ ಯಲ್ಲಿ ಛಾಯಾಗ್ರಾಹಕರಾಗಿರುವ ವೀಣ್ ನಾಯಕ್( 45) ಮೃತ ಪಟ್ಟವರಾಗಿದ್ದಾರೆ.

ಪ್ರವೀಣ್ ಮತ್ತು ತಂಡ ಅವರ ನಿವಾಸದ ಪರಿಸರದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ನಾಯ್ಕ್ ಅವರ ಪರ ಮನೆ ಮನೆಗೆ ತೆರಳಿ ಮತಯಾಚನೆ ನಡೆಸುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಘಂಟೆಯ ಹೊತ್ತಿಗೆ ಎದೆನೋವೆಂದು ಕುಸಿದು ಬಿದ್ದಿದ್ದರು. ತತ್ ಕ್ಷಣ ಅವರನ್ನು ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರಕ್ಕೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು. ಮೃತರು ಪತ್ನಿ, ಪುತ್ರ,ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮುಲ್ಕಾಜೆ ಮಾಡದಲ್ಲಿ ಪ್ರವೀಣ್ ಡಿಜಿಟಲ್ ಸ್ಟುಡಿಯೋ ನಡೆಸುತ್ತಿದ್ದ.

Previous post

ಸುಳ್ಯದಲ್ಲಿ ಸುಮನರವರ ವಿಜಯದ ಮೂಲಕ ಕ್ಷೇತ್ರದ ಮತದಾರರು ಅಭಿವೃದ್ಧಿಯ ರಾಜಕೀಯಕ್ಕೆ ಮುನ್ನುಡಿ ಬರೆಯಲಿದ್ದಾರೆ: ಆಪ್ ಜಿಲ್ಲಾಧ್ಯಕ್ಷ ಅಶೋಕ್ ಅಡಮಲೆ

Next post

ಕೊಟ್ಟ ಮಾತಿಗೆ ತಪ್ಪಲಾರೆ, ಸುಳ್ಳು ಭರವಸೆಯನ್ನು ಕೊಡುವುದಿಲ್ಲ : ಅಶೋಕ್ ಕುಮಾರ್ ರೈ

Leave a Reply

You May Have Missed

error: Content is protected !!