ಶಾಸಕರ ಹಕ್ಕುಚ್ಯುತಿ ಆರೋಪ: ದ.ಕನ್ನಡ ಡಿಸಿ ಕಚೇರಿ ಎದುರು ಬಿಜೆಪಿ ಶಾಸಕರ ಧರಣಿ

ಶಿಷ್ಟಾಚಾರ ಪಾಲನೆ ಮಾಡಿಲ್ಲ ಎಂಬ ಕಾರಣಕ್ಕೆ ಅಧಿಕಾರಿಗಳ ಅಮಾನತು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯುತ್ತಿದೆ.
ಶಾಸಕರ ಹಕ್ಕುಚ್ಯುತಿ ಆಗಿದೆ, ಅಧಿಕಾರಿಗಳ ಅಮಾನತು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ. ಡಿಸಿ ಕಚೇರಿಯ ಬಾಗಿಲಲ್ಲಿ ಶಾಸಕರು ಧರಣಿ ಕೂತಿದ್ದಾರೆ.
ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್, ಎಂಎಲ್ ಸಿ ಪ್ರತಾಪ ಸಿಂಹ ನಾಯಕ್ ಭಾಗಿಯಾಗಿದ್ದಾರೆ.


















Leave a Reply