ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ

ಕಬಡ್ಡಿ ಆಟಗಾರ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ:ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುದುವೆಟ್ಟು ಎಂಬಲ್ಲಿ ಆ.31 ರಂದು ನಡೆದಿದೆ.
ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ.
ಸ್ವರಾಜ್ ಪ್ರಸುತ್ತ ಧರ್ಮಸ್ಥಳದಲ್ಲಿ ವಾಸವಾಗಿದ್ದು ಇಂದು ಪುದುವೆಟ್ಟುವಿನಲ್ಲಿದ್ದ ಅವರ ಹಳೆಮನೆಯ ಸ್ನಾನಗೃಹದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅತ್ಯುತ್ತಮ ಕಬಡ್ಡಿ ಆಟಗಾರರಾಗಿದ್ದ ಇವರು ಉಜಿರೆಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಮೃತರು ತಂದೆ ಸತೀಶ್,ತಾಯಿ ಸ್ವಾತಿ ಹಾಗೂ ಸಹೋದರಿ, ಕುಟುಂಬ ವರ್ಗವನ್ನು ಅಗಲಿದ್ದಾರೆ.

Previous post

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ 2023 -24ನೇ ಅವಧಿಯಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ವಿದ್ಯಾ ಸಂಸ್ಥೆಯ ಪರಿಚಯ ಕಾರ್ಯಕ್ರಮ

Next post

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾದ ಕಾರು; ಮೂವರು ದುರ್ಮರಣ

Leave a Reply

You May Have Missed

error: Content is protected !!