ಸತ್ತ ಇಲಿ ಬಾಯಲ್ಲಿಟ್ಟುಕೊಂಡು ಕಾವೇರಿ ನೀರು ಹರಿಸುವಂತೆ ತಮಿಳುನಾಡಿನ ರೈತರ ವಿನೂತನ ಪ್ರತಿಭಟನೆ..!!

ಸತ್ತ ಇಲಿ ಬಾಯಲ್ಲಿಟ್ಟುಕೊಂಡು ಕಾವೇರಿ ನೀರು ಹರಿಸುವಂತೆ ತಮಿಳುನಾಡಿನ ರೈತರ ವಿನೂತನ ಪ್ರತಿಭಟನೆ..!!

ಕಾವೇರಿ ನೀರಿಗಾಗಿ ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ಕರ್ನಾಟಕ ಸರ್ಕಾರದ ವಿರುದ್ಧ ಹಾಗೂ ಕಾವೇರಿ ನೀರು ಹರಿಸುವಂತೆ ಒತ್ತಾಯಿಸಿ ತಮಿಳುನಾಡು ರೈತರು ವಿನೂತನವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಸತ್ತ ಇಲಿಯನ್ನು ಬಾಯಲ್ಲಿಟ್ಟುಕೊಂಡು ರೈತರು ಈ ಪ್ರತಿಭಟನೆ ಮಾಡುತ್ತಿದ್ದಾರೆ. ಈಗಾಗಲೇ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಆದರೂ ಪಟ್ಟು ಬಿಡದ ತಮಿಳನ್ನರು ಮತ್ತೆ ನೀರು ಹರಿಸುವಂತೆ ಒತ್ತಾಯಿಸುತ್ತಿದ್ದಾರೆ.

ಇತ್ತ ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್‍ಗೆ ಕರೆ ನೀಡಲಾಗಿದೆ. ವಿವಿಧ ಸಂಘಟನೆಗಳು ಬಂದ್‍ಗೆ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ತೊಡಗಿವೆ. ನಮಗೇ ಕುಡಿಯಲು ನೀರಿಲ್ಲದಿದ್ದು, ತಮಿಳುನಾಡಿಗೆ ಯಾಕೆ ಹರಿಸುತ್ತೀರಿ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

Leave a Reply

You May Have Missed

error: Content is protected !!