ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ; ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ

ಖಾಸಗಿ ಶಾಲೆಯಲ್ಲಿ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದ ಘಟನೆ ಶಿವಮೊಗ್ಗದ ಸಾಂದೀಪನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಲೋಕೇಶ್ ಎಂಬುವವರು, 10ನೇ ತರಗತಿ ವಿದ್ಯಾರ್ಥಿ ಧನುಷ್ ಮೇಲೆ ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ವಿದ್ಯಾರ್ಥಿ ಕಾಲು, ತೊಡೆ, ಬೆನ್ನಿಗೆ ಬಾಸುಂಡೆ ಬಂದಿದೆ. ಗಾಯಾಳು ವಿದ್ಯಾರ್ಥಿಗೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ವಿವರ
ನವೆಂಬರ್​ 18ರಂದು ಶಾಲೆಯಲ್ಲಿ ವಿಜ್ಞಾನ ಪ್ರದರ್ಶನ ಕಾರ್ಯಕ್ರಮ ಇತ್ತು. ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ವಸ್ತುಗಳ ಪ್ರದರ್ಶನ ಮಾಡಿದ್ದರು. ಈ ವೇಳೆ ಹಲ್ಲೆಗೊಳಗಾದ ವಿದ್ಯಾರ್ಥಿ ತಾಯಿ ಬಂದಿದ್ದರು. ತಾಯಿ ಬಳಿ ಇದ್ದ ಮೊಬೈಲ್​​​ ಪಡೆದು ಧನುಷ್, ತಾನು ತಯಾರಿಸಿದ್ದ ಮಾಡೆಲ್​ಗಳನ್ನು ​ ಚಿತ್ರೀಕರಣ ಮಾಡಿದ್ದ. ಈ ವಿಚಾರಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಲೋಕೇಶ್ ಹಲ್ಲೆ​ ನಡೆಸಿದ್ದರು. ಹಲ್ಲೆ ವಿಚಾರ ತಿಳಿದು ಪೋಷಕರು, ಶಿಕ್ಷಕ ಲೋಕೇಶ್ ಅವರನ್ನು​ ಪ್ರಶ್ನಿಸಿದ್ದರು. ಈ ವೇಳೆ ಪೋಷಕರ ಮೇಲೆಯೇ ದರ್ಪ ತೋರಿದ್ದ. ಶಿಕ್ಷಕನ ನಡೆ ಖಂಡಿಸಿ ಪೋಷಕರು ತರಾಟೆ ತೆಗೆದುಕೊಳ್ಳುತ್ತಿದ್ದಂತೆ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳುವುದಾಗಿ ಶಾಲಾ ಮಂಡಳಿ ಭರವಸೆ ನೀಡಿತ್ತು. ಇಷ್ಟಾದರೂ ಕೇಳದ ಪೋಷಕರು, ಶಿಕ್ಷಕನ ವಿರುದ್ಧ ವಿನೋಬನಗರ ಠಾಣೆಗೆ ದೂರು ನೀಡಿದ್ದರು.

ಈ ಘಟನೆ ಕುರಿತು ಧನುಷ್ ತಂದೆಗೆ ತಾಯಿ ಮಾಹಿತಿ ನೀಡಿದ್ದರು. ಶಾಲೆಗೆ ಹೋಗಿ ಧನುಷ್ ತಾಯಿ ಮೊಬೈಲ್ ವಾಪಸ್ ಪಡೆದುಕೊಂಡ ತಂದೆ ಗಿರೀಶ್, ಶಿಕ್ಷಕರ ಹಲ್ಲೆಯಿಂದ ಬಳಲುತ್ತಿದ್ದ ಮಗನಿಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ಕರೆದುಕೊಂಡು ಹೋಗಿದ್ದಾರೆ. ಮಗನ ಮೇಲಿನ ಹಲ್ಲೆಗೆ ಪೋಷಕರ ಮತ್ತು ಪೋಷಕರ ಸ್ನೇಹಿತರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಹಲ್ಲೆ ಮಾಡಿದ ಶಿಕ್ಷಕರ ಮತ್ತು ಶಾಲೆಯ ಆಡಳಿತ ಮಂಡಳಿಯ ವಿರುದ್ಧ ಕ್ರಮಕ್ಕೆ ಪೋಷಕರ ಪಟ್ಟು ಹಿಡಿದಿದ್ದಾರೆ. ಹಲ್ಲೆ ಮಾಡಿದ ಶಿಕ್ಷಣ ಲೋಕೇಶ್​ಗೆ ಪೋಷಕರು ಮತ್ತು ಅವರ ಸ್ನೇಹಿತರು ತರಾಟೆ ತೆಗೆದುಕೊಂಡ ಬಳಿಕ ವಿನೋಬ ನಗರ ಪೊಲೀಸ್ ಠಾಣೆ ಪೊಲೀಸರು ಆಗಮಿಸಿ, ಶಿಕ್ಷಕ ಲೋಕೇಶ್​ನನ್ನು ಕರೆದುಕೊಂಡ ಹೋಗಿದ್ದಾರೆ.

Previous post

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ; ಡಾ.ವೀರೇಂದ್ರ ಹೆಗ್ಗಡೆ ಗೆ ಹೋರಾಟ ಸಮಿತಿಯಿಂದ ಮನವಿ

Next post

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಮತ್ತೆ ನಳಿನ್ ಕುಮಾರ್ ಕಟೀಲ್ ಅಭ್ಯರ್ಥಿ: ಬಂಡಾಯದ ಬೆಂಕಿಗೆ ತುಪ್ಪ ಸುರಿದರಾ ವಿಜಯೇಂದ್ರ?

Leave a Reply

You May Have Missed

error: Content is protected !!