ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ-ಉಜಿರೆಯ ಎಸ್ ಡಿ ಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಸ್ಪರ್ಧೆ-ಉಜಿರೆಯ ಎಸ್ ಡಿ ಎಂ ಪ.ಪೂ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬಹುಮಾನ

ಶ್ರೀ ಮದ್ಭಗವದ್ಗೀತಾ ಅಭಿಯಾನದ ಅಂಗವಾಗಿ ಶಿರಸಿಯ ಶ್ರೀಸ್ವರ್ಣವಲ್ಲೀ ಮಹಾಸಂಸ್ಥಾನ ಹಾಗೂ ಜನಕಲ್ಯಾಣ ಟ್ರಸ್ಟ್ ಸಹಯೋಗದಲ್ಲಿ ಬೆಳಗಾವಿಯ ಆನಗೊಳ ಸಂತಮಿರಾ ಶಾಲೆಯಲ್ಲಿ ನಡೆದ ರಾಜ್ಯಮಟ್ಟದ ಶ್ರೀ ಭಗವದ್ಗೀತಾ ಪದವಿಪೂರ್ವ ವಿಭಾಗದ ಸ್ಪರ್ಧೆಗಳಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಅದಿತಿ ಚಿಪ್ಳೂಣ್ ಕರ್, ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಹಾಗೂ ಸುಮೇಧಾ ಗಾಂವ್ಕರ್, ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನ ಪಡೆದಿದ್ದಾರೆ.

ಸೋಂದಾ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಬೆಳಗಾವಿಯ ಲಿಂಗರಾಜು ಕಾಲೇಜು ಮೈದಾನದಲ್ಲಿ ನಡೆದ ಗೀತಾ ಸಮರ್ಪಣಾ ಸಮಾರಂಭದಲ್ಲಿ ಬಹುಮಾನ ನೀಡಿ ಹರಸಿದರು.

Leave a Reply

You May Have Missed

error: Content is protected !!