ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೇಂದ್ರ ಸಚಿವ ಭಗವಂತ ಖೂಬ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೇಂದ್ರ ಸಚಿವ ಭಗವಂತ ಖೂಬ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕೇಂದ್ರದ ನವೀನ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಮತ್ತು ರಾಸಾಯನಿ ಕಗಳು ಮತ್ತು ರಸ ಗೊಬ್ಬರಗಳ ಸಚಿವಾಲಯದ ರಾಜ್ಯ ಸಚಿವ ಭಗವಂತ ಖೂಬ ಬುಧವಾರ ಭೇಟಿ ನೀಡಿದರು.

ಕ್ಷೇತ್ರಕ್ಕೆ ಭೇಟಿ ನೀಡಿದ ಸಚಿವರು ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಗುಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಸಚಿವರನ್ನು ಗೌರವಿಸಲಾಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ಕಡಬ ತಹಶೀಲ್ದಾರ್‌ ಪ್ರಭಾಕರ ಖಜೂರೆ, ಪ್ರಮುಖರಾದ ಎಸ್‌.ಎನ್‌. ಮನ್ಮಥ, ಶ್ರೀನಾಥ್‌ ಬಾಳಿಲ, ಸಂತೋಷ್‌ ಜಾಕೆ ಉಪಸ್ಥಿತರಿದ್ದರು.

Leave a Reply

You May Have Missed

error: Content is protected !!