ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು -ದೂರು

ಕೊಕ್ಕಡ: ತೋಟದಲ್ಲಿ ಕಟ್ಟಿ ಹಾಕಿದ್ದ ದನ ಕಳವು -ದೂರು

ನೆಲ್ಯಾಡಿ: ತೋಟದಲ್ಲಿ ಮೇಯಲು ಕಟ್ಟಿ ಹಾಕಿದ್ದ ದನ ಕಳವುಗೊಂಡಿರುವ ಘಟನೆ ಕೊಕ್ಕಡ ಗ್ರಾಮದ ಶಬರಾಡಿ ಎಂಬಲ್ಲಿ ಮಾ.25ರಂದು ನಡೆದಿದೆ.

ಶಿವಪ್ರಸಾದ್‌ ಎಂಬವರು ಮಾ.25ರಂದು ಬೆಳಿಗ್ಗೆ ತನ್ನ ದನವನ್ನು ತನ್ನ ತೋಟದಲ್ಲಿ ಮೇಯಲೆಂದು ಕಟ್ಟಿ ಹಾಕಿದ್ದು, ಬಳಿಕ ಮದ್ಯಾಹ್ನ ತೋಟಕ್ಕೆ ಬಂದು ನೋಡುವಾಗ ದನವು ಕಟ್ಟಿ ಹಾಕಿದ್ದಲ್ಲಿ ಕಂಡು ಬಂದಿರುವುದಿಲ್ಲ. ಈ ಬಗ್ಗೆ ಎಲ್ಲಾ ಕಡೆ ಹುಡುಕಾಡಿದರೂ ದನವು ಎಲ್ಲೂ ಪತ್ತೆಯಾಗಿರುವುದಿಲ್ಲ. ಕಳವಾದ ದನದ ಮೌಲ್ಯ ರೂ20,000 ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಶಿವಪ್ರಸಾದ್ ಅವರು ನೀಡಿದ ದೂರಿನ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Leave a Reply

You May Have Missed

error: Content is protected !!