ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಕ್ಯಾ| ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಅವರು ಪೂಜೆ ಸಲ್ಲಿಸಿದರು. ಬಳಿಕ ಬಂಟ್ಸ್ ಹಾಸ್ಟೆಲ್ ನ ಬಿಜೆಪಿ ಚುನಾವಣಾ ಕಚೇರಿಯಿಂದ ಮಂಗಳೂರು ಪುರಭವನವರೆಗೆ ಮೆರವಣಿಗೆ ಸಾಗಿಬಂತು. ಸಾವಿರಾರು ಕಾರ್ಯಕರ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಪುರಭವನದ ಹೊರಭಾಗದಲ್ಲಿ ಬಿಜೆಪಿ ಪ್ರಚಾರ ಸಮಾವೇಶ ನಡೆಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಮುಖಂಡರಾದ ಸಿ.ಟಿ.ರವಿ, ವಿ.ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಅರುಣ್ ಕುಮಾರ್ ಪುತ್ತಿಲ, ದ.ಕ ಹಾಗೂ ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ಸಹಿತ ಪ್ರಮುಖರು ಭಾಗವಹಿಸಿದರು.

Leave a Reply

You May Have Missed

error: Content is protected !!