ದೈಹಿಕ ಶಿಕ್ಷಕ ಜೋನ್.ಕೆ.ಪಿ ಸೇವಾ ನಿವೃತ್ತಿ-ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ದೈಹಿಕ ಶಿಕ್ಷಕ ಜೋನ್.ಕೆ.ಪಿ ಸೇವಾ ನಿವೃತ್ತಿ-ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೀಳ್ಕೊಡುಗೆ ಸನ್ಮಾನ

ನೆಲ್ಯಾಡಿ: ಬೆಳ್ತಂಗಡಿ ಹಳೆ ಪೇಟೆಯ ಸರಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಸೇವೆಗೆ ಸೇರ್ಪಡೆಗೊಂಡು, ಸುದೀರ್ಘ ಮೂವತ್ತು ವರ್ಷಗಳ ಸೇವೆಯ ನಂತರ ಜು.31ರಂದು ವಿದಾಯ ಹೇಳಿದ ಜೋನ್.ಕೆ.ಪಿ ಅವರನ್ನು, ಗೋಳಿತಟ್ಟು ಶಾಲೆಯಿಂದ ನಿವೃತ್ತಿ ಪಡೆದ ಅವರನ್ನು, ಅವರ ಸ್ವಗೃಹದಲ್ಲಿ ಹಿರಿಯರ, ವೃತ್ತಿ ಬಾಂಧವರ, ನಾಡಿನ ಪ್ರಮುಖರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.

ಸಂತ ಅಲ್ಫೋನ್ಸ ಚರ್ಚ್‌ನ ಧರ್ಮಗುರು ವಂದನೀಯ ಶಾಜಿ ಮಾತ್ಯು ಅವರ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು. ದೇಶದ ಇತಿಹಾಸದಲ್ಲಿ ಪ್ರಥಮ ಬಾರಿಗೆ, ವಿದಾಯದ ಸಂದರ್ಭದಲ್ಲಿ, ಶಿಕ್ಷಕರೊಬ್ಬರು ರಾಷ್ಟ್ರಪಿತ ಮಹಾತ್ಮ ಗಾಂಧಿಯ ಪುತ್ತಳಿಕೆಯನ್ನು ಸಾವಿರಾರು ರೂಪಾಯಿ ವೆಚ್ಚದಲ್ಲಿ ನಿರ್ಮಿಸಿ ಶಾಲಾ ವಠಾರದಲ್ಲಿ ಸ್ಥಾಪನೆ ಮಾಡಿರುವುದು. ಎಲ್ಲಾ ಸರಕಾರಿ ನೌಕರರಿಗೆ ಹೊಸದೊಂದು ಪರಿಕಲ್ಪನೆಗೆ ನಾಂದಿಯಾಗಿರುವುದು ಜೋನ್ ಕೆ.ಪಿ ಅವರ ವಿಶೇಷ ಸಾಧನೆಯಾಗಿದೆ ಮತ್ತು ಅನುಕರಣೀಯ ಮಾದರಿಯಾಗಿದೆ.

ಈ ಸಂದರ್ಭದಲ್ಲಿ ಚರ್ಚ್‌ನ ಟ್ರಸ್ಟಿಗಳಾದ ನಿವೃತ್ತ ಸೈನಿಕ ಅಲೆಕ್ಸ್, ಪಾಲನ ಸಮಿತಿಯ ಜಿನೋಯ್ ಜಾರ್ಜ್, ಭಗಿನಿಯರಾದ ವಂ.ಲಿಸ್ ಮಾತ್ಯು, ವಂದನೀಯ ಎಲ್ ಸ್ಲೀಟ್, ಹಿರಿಯ ಮುಖಂಡ ಕೆ.ಪಿ.ತೋಮಸ್, ವಂ.ಫಾ.ಜಿಬಿನ್ ಮೊದಲಾದವರು ಉಪಸ್ಥಿತರಿದ್ದರು.

Previous post

ಪಟ್ರಮೆ: ಗುಡ್ಡ ಜರಿದು ಮನೆಯ ಹಿಂಭಾಗ ಸಂಪೂರ್ಣ ಹಾನಿ; ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಭೇಟಿ

Next post

ಕೊಕ್ಕಡ: ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ; ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Leave a Reply

You May Have Missed

error: Content is protected !!