ಕೊಕ್ಕಡ: ಸಾಲದ ಬಾಧೆಯಿಂದ ಮನನೊಂದು ಕೃಷಿಕ ಆತ್ಮಹತ್ಯೆ

ಕೊಕ್ಕಡ: ಸಾಲದ ಬಾಧೆಯಿಂದ ಮನನೊಂದು ಕೃಷಿಕ ಆತ್ಮಹತ್ಯೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೆಂಗುಡೇಲು ನಿವಾಸಿ ಪೂವಣಿ ಗೌಡ(54) ಎಂಬುವರು ಅವರ ಜಾಗದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 24ರಂದು ನಡೆದಿದೆ.

ಕೃಷಿಕರಾಗಿದ್ದ ಪೂವಣಿ ಗೌಡರು ಸಾಲದ ಬಾಧೆಯಿಂದಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮನೆಯವರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದು. ಸ್ಥಳಕ್ಕೆ ಧರ್ಮಸ್ಥಳ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಮೃತರಿಗೆ ಪತ್ನಿ, ಗಂಡು ಹಾಗೂ ಹೆಣ್ಣು ಮಕ್ಕಳು ಇದ್ದಾರೆ.

Previous post

ಇಚಿಲಂಪಾಡಿ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘದಿಂದ ರಸ್ತೆಯ ನಾಮಫಲಕ ಅನಾವರಣ

Next post

ವಿಟ್ಲ: ಸ್ವಸ್ತಿಕ್‌ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಸಹಯೋಗದಲ್ಲಿ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Leave a Reply

You May Have Missed

error: Content is protected !!