ಶಿರಾಡಿ: ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ; ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ

ಶಿರಾಡಿ: ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ; ವ್ಯಕ್ತಿ ಆಸ್ಪತ್ರೆಯಲ್ಲಿ ನಿಧನ

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಎಂಬಲ್ಲಿ ನ.25 ರಂದು ಬೆಳಗ್ಗೆ ಕೆ ಎಸ್ ಆರ್ ಟಿಸಿ ಬಸ್ ಪಾದಚಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ವ್ಯಕ್ತಿ ಸಂಜೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಘಟನೆ ನಡೆದಿದೆ.

ಗಾಯಗೊಂಡವರನ್ನು ಶಿರಾಡಿ ಗ್ರಾಮದ ಪದಂಬಳ ನಿವಾಸಿ ಮಥಾಯಿ(ಮತ್ತಚ್ಚನ್)(70) ಎಂದು ಗುರುತಿಸಲಾಗಿದೆ.

ಗಾಯಗೊಂಡಿದ್ದ ವ್ಯಕ್ತಿಯನ್ನು 108 ಆಂಬುಲೆನ್ಸ್ ನಲ್ಲಿ ಪುತ್ತೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ನಿಧನರಾದರು. 

ಮೃತರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.

ಶಿರಾಡಿ ಈ ಪ್ರದೇಶದಲ್ಲಿ ಸ್ಥಳೀಯರಿಗೆ ಓಡಾಡಲು ಸರ್ವಿಸ್ ರಸ್ತೆಯನ್ನು ನಿರ್ಮಿಸಲಿಲ್ಲ ಹಾಗೂ ರಸ್ತೆ ಕ್ರಾಸಿಂಗ್ ಪೇಟೆಯ ಮಧ್ಯದಲ್ಲಿ ಇಲ್ಲದಿರುವುದರಿಂದ ಈ ಪ್ರದೇಶದಲ್ಲಿ ಅತಿ ಹೆಚ್ಚು ಅಪಘಾತಗಳು ನಡೆಯುತ್ತಲೇ ಇದೆ. ಸರ್ವಿಸ್ ರಸ್ತೆಗಾಗಿ ಹಲವು ಬಾರಿ ಸಾರ್ವಜನಿಕರು ಮನವಿ ನೀಡಿದರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಸ್ಥಳೀಯರು ತಮ್ಮ ಅಳಲನ್ನು ತೋಡಿಕೊಳ್ಳುತ್ತಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೆಂಬುದು ಊರವರ ಅಭಿಲಾಷೆ.

Leave a Reply

You May Have Missed

error: Content is protected !!