ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳ

ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಮಕ್ಕಳ ಮಾರುಕಟ್ಟೆ ಮೇಳವನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವ್ಯವಹಾರ ಜ್ಞಾನವನ್ನು ಬೆಳೆಸುವುದು,ಲಾಭ ನಷ್ಟದ ಪರಿಕಲ್ಪನೆಯನ್ನು ಮೂಡಿಸುವುದು ಹಾಗೂ ಕೊಡು ಕೊಳ್ಳುವುಕೆಯ ಜ್ಞಾನವನ್ನು ತಿಳಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜಿಸಲಾಯಿತು.

ಸೈಂಟ್ ಆಂಟನೀಸ್ ಪ್ರೌಢ ಶಾಲೆಯ ಮುಖ್ಯಶಿಕ್ಷಕ ಶ್ರೀಧರ ಗೌಡ ಮೇಳವನ್ನು ಉದ್ಘಾಟಿಸಿದರು. ಬಿಷಪ್ ಪೋಳಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷೆ ವಿಶಾಲಾಕ್ಷಿ ಪ್ರಥಮ ಖರೀದಿ ಮಾಡಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.

ಸಂಸ್ಥೆಯ ಸಂಚಾಲಕರಾದ ರೆ.ಫಾ.ಹನಿ ಜೇಕಬ್ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವನ್ನು ಕೋರಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮೇಹಿ ಜಾರ್ಜ್ ಹಾಗೂ ಸದಸ್ಯರು, ಎಲ್ಲಾ ಸಿಬ್ಬಂದಿ ವರ್ಗ, ಪಾಲಕ-ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿ, ವಿವಿಧ ವಸ್ತುಗಳನ್ನು ಖರೀದಿ ಮಾಡುವ ಮೂಲಕ ವಿದ್ಯಾರ್ಥಿಗಳನ್ನು ಉತ್ತೇಜಿಸಿದರು.

  •  

Leave a Reply

You May Have Missed

error: Content is protected !!