ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ನಡೆಯಿತು. ಈ ಕಾರ್ಯಕ್ರಮವನ್ನುನಾರಾಯಣಗೌಡ ಮುಚ್ಚುರು ಉದ್ಘಾಟಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಅವರ ಮಾತಿನಲ್ಲಿಯೇ, ಯಕ್ಷಗಾನದ ಪೋಷಣೆ ಮತ್ತು ಮುಂದಿನ ಪೀಳಿಗೆಗೆ ಈ ಕಲೆಯನ್ನು ಪರಿಚಯಿಸುವ ಅಗತ್ಯತೆಯ ಕುರಿತು ಚರ್ಚಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೀತಾರಾಮ ಮಡಿವಾಳ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಗೇರುಕಟ್ಟೆ ಹಾಗೂ ಭರತನಾಟ್ಯ ನೃತ್ಯಗುರು ವಿದುಷಿ ಶ್ರೀಮತಿ ಡಿಂಪಲ್ ಅವರು ಉಪಸ್ಥಿತರಿದ್ದು, ಮಕ್ಕಳಿಗೆ ಸಾಂಸ್ಕೃತಿಕ ಕಲೆಗಳ ಪ್ರಾಮುಖ್ಯತೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಕಿರಣ್ ಪುಷ್ಪಗಿರಿ ಅವರು ವಿಶೇಷ ಅತಿಥಿಯಾಗಿ ಆಗಮಿಸಿ, ಮಕ್ಕಳಿಗೆ ಶುಭ ಹಾರೈಸಿ ಸಿಹಿ ತಿಂಡಿಗಳನ್ನು ಹಂಚುವ ಮೂಲಕ ಸಂಭ್ರಮವನ್ನು ಹೆಚ್ಚಿಸಿದರು. ಕಾರ್ಯಕ್ರಮವನ್ನು ಸಂಧ್ಯಾ ಆನಂದ್ ನಿರೂಪಿಸಿದರು. ಕೊನೆಗೆ ಯಕ್ಷಗುರು ವಂದನಾರ್ಥ ಮಾತುಗಳನ್ನು ಹೇಳಿದರು.

  •  

Leave a Reply

You May Have Missed

error: Content is protected !!