ಸುಹಾಸ್ ಶೆಟ್ಟಿ ಭೀಕರ ಹತ್ಯೆ: ದ.ಕ. ಜಿಲ್ಲೆಯಲ್ಲಿ ಬಂದ್‌ಗೆ ಕರೆ, ಮೇ 6ರವರೆಗೆ ನಿಷೇಧಾಜ್ಞೆ

ಸುಹಾಸ್ ಶೆಟ್ಟಿ ಭೀಕರ ಹತ್ಯೆ: ದ.ಕ. ಜಿಲ್ಲೆಯಲ್ಲಿ ಬಂದ್‌ಗೆ ಕರೆ, ಮೇ 6ರವರೆಗೆ ನಿಷೇಧಾಜ್ಞೆ

ಸುಹಾಸ್ ಶೆಟ್ಟಿ ಭೀಕರ ಹತ್ಯೆ: ದ.ಕ. ಜಿಲ್ಲೆಯಲ್ಲಿ ಬಂದ್‌ಗೆ ಕರೆ, ಮೇ 6ರವರೆಗೆ ನಿಷೇಧಾಜ್ಞೆ

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲೆ ಬಂದ್‌ಗೆ ಕರೆ ನೀಡಿದ್ದು, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮೇ 6ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಗುರುವಾರ ರಾತ್ರಿ ಬಜಪೆ ಕಿನ್ನಿಪದವಿನಲ್ಲಿ ನಡೆದ ಭೀಕರ ಹತ್ಯೆಯಲ್ಲಿ, ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ದುಷ್ಕರ್ಮಿಗಳು ಬೆನ್ನಟ್ಟಿದ ಪರಿಣಾಮ ಕಾರು ನುಗ್ಗಿದ ಸಲೂನ್‌ನಲ್ಲಿ ಹೊಡೆದು ತಲವಾರಿನಿಂದ ನಿರ್ದಯವಾಗಿ ಹತ್ಯೆಗೈದಿದ್ದಾರೆ.

ಇಂದು ಬೆಳಗ್ಗೆ 10:30ಕ್ಕೆ ಎಜೆ ಆಸ್ಪತ್ರೆಯಿಂದ ಕಾರಿಂಜದವರೆಗೆ ಅಂತಿಮ ಯಾತ್ರೆ ನಡೆಯಲಿದೆ. ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿರುವ ವಿಹಿಂಪ, ಜಿಲ್ಲೆಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಜಿಲ್ಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವಹಿಸಲಾಗಿದೆ; ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ನಿಯೋಜನೆಗೊಂಡಿದೆ.

ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ 153 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಜನಜಾಗೃತಿಯಿಂದ ಕೂಡಿದ ಶಾಂತಿಯಿಂದ ನಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

  •  

Leave a Reply

You May Have Missed

error: Content is protected !!