ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಪಿಕ್ ಅಪ್ ಚಾಲಕನ ಬರ್ಬರ ಹತ್ಯೆ

Bhatwala

ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಂದ ಪಿಕ್ ಅಪ್ ಚಾಲಕನ ಬರ್ಬರ ಹತ್ಯೆ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಮಂಗಳವಾರ ನಡೆದಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ ಸಹೋದರ ರಹೀಮ್ ಎಂಬಾತನನ್ನು ಕೊಲೆ ಮಾಡಲಾಗಿದೆ.

ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರೂ ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ.

ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ. ಆದರೆ ಆತನಿಗೆ ಕೈಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

  •  

Leave a Reply

You May Have Missed

error: Content is protected !!