ನೆಲ್ಯಾಡಿ ಜೇಸಿಐಯಿಂದ ವೈದ್ಯರ ದಿನಾಚರಣೆ

Vittla

ನೆಲ್ಯಾಡಿ ಜೇಸಿಐಯಿಂದ ವೈದ್ಯರ ದಿನಾಚರಣೆ

ವಿಟ್ಲ: ಜೆಸಿಐ ನೆಲ್ಯಾಡಿ ಘಟಕದ ವತಿಯಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಸಮುದಾಯ ಆರೋಗ್ಯ ಕೇಂದ್ರ ವಿಟ್ಲದಲ್ಲಿ ವಿಶೇಷ ಕಾರ್ಯಕ್ರಮವನ್ನು ಜುಲೈ 1ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 19 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ವೇದಾವತಿ ಎಂ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಜೊತೆಗೆ, 17 ವರ್ಷಗಳಿಂದ ಸೇವೆಯಲ್ಲಿರುವ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞ ಡಾ.ಜೀವನ್ ಲಾಸ್ರದೋ ಮತ್ತು 15 ವರ್ಷಗಳ ಸೇವಾ ಅನುಭವದ ಪೆರುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ.ಕೃಷ್ಣಮೂರ್ತಿ ಅವರನ್ನು ಕೂಡ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜೆಸಿಐ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಎ.ಜೆ.ಆಸ್ಪತ್ರೆಯ ವೈದ್ಯರುಗಳಾದ ಡಾ.ಸುಚಿತ ಎಸ್. ಶೆಟ್ಟಿ, ಡಾ.ನಿಬಿನ್ ನಿಶಾ, ಡಾ.ವಿದ್ಯಾ ಕೃಷ್ಣ, ಡಾ.ಶಫೀಕ್, ಡಾ.ಸ್ಪೂರ್ತಿ ಶೆಟ್ಟಿ, ಡಾ.ಶ್ರೇಷ್ಠ ಆಳ್ವ, ಡಾ.ನಿರಂಜನ್ ಹಾಗೂ ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

  •  
Previous post

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ; ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು

Next post

ನೆಲ್ಯಾಡಿ: ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ

Leave a Reply

You May Have Missed

error: Content is protected !!