ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

SL Bhyrappa

ಪದ್ಮಭೂಷಣ, ಹಿರಿಯ ಸಾಹಿತಿ ಎಸ್​​​ಎಲ್ ಭೈರಪ್ಪ ನಿಧನ

ಬೆಂಗಳೂರು: ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿ ನಗರದ ಆಸ್ಪತ್ರೆಯಲ್ಲಿ ಇಂದು(ಸೆ.24) ಮಧ್ಹಾಹ್ನ 2.38ಕ್ಕೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ವಯೋಸಹಜ ಕಾಯಿಲೆ ಬಳಲುತ್ತಿದ್ದ ಬೈರಪ್ಪ ಅವರು ಮರುವಿನ ಕಾಯಿಲೆ ಸಹ ಇತ್ತು. ಹೀಗಾಗಿ ಅವರು 3 ತಿಂಗಳಿನಿಂದ ಮೈಸೂರು ಬಿಟ್ಟು ಬೆಂಗಳೂರಿನಲ್ಲಿ ವಾಸವಾಗಿದ್ದರು. 94 ವರ್ಷದ ಹಿರಿಯ ಸಾಹಿತಿ ಎಸ್​ ಎಲ್​ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಇವರಿಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಭೈರಪ್ಪ ಅವರು ಪರ್ವ, ಆವರಣ, ಗೃಹಭಂಗ ಸೇರಿದಂತೆ ಅನೇಕ ಕಾದಂಬರಿಗಳನ್ನು ಬರೆದಿದ್ದಾರೆ. ಭೈರಪ್ಪ ಅವರು ಹಾಸನ ಜಿಲ್ಲೆಯ ಸಂತೇಶಿವಾರ ಗ್ರಾಮದವರು. ತಮ್ಮ ಸ್ವಗ್ರಾಮದ ಕೆರೆಗಳಿಗೆ ನೀರು ತುಂಬಿಸಲು ಕೂಡ ಶ್ರಮಿಸಿದ್ದರು. ಬಾಲ್ಯದಲ್ಲಿ ಕಷ್ಟದಲ್ಲೇ ಬೆಳೆದು ವಿದ್ಯಾಭ್ಯಾಸ ಮಾಡಿದ್ದರು. ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ನೀಡಬೇಕೆಂದು ಅವರ ಓದುಗ ಅಭಿಮಾನಿಗಳು ಒತ್ತಾಯಿಸುತ್ತಿದ್ದರು. ಆದ್ರೆ, ಜ್ಞಾನಪೀಠ ಪ್ರಶಸ್ತಿಗೆ ಪರ್ಯಾಯವಾದ ಸರಸ್ವತಿ ಸಮ್ಮಾನ್ ಪ್ರಶಸ್ತಿ ಭೈರಪ್ಪ ಅವರಿಗೆ ಬಂದಿತ್ತು.

  •  
Previous post

ಪುತ್ತೂರು ತಾಲೂಕು ರಬ್ಬರ್ ಬೆಳೆಗಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಸಾದ್ ಕೌಶಲ್ ಶೆಟ್ಟಿ, ಉಪಾಧ್ಯಕ್ಷರಾಗಿ ರಾಯ್ ಅಬ್ರಹಾಂ ಅವಿರೋಧ ಆಯ್ಕೆ

Next post

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಮಂಜೂರಾತಿ – 20,000ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವು

Leave a Reply

You May Have Missed

error: Content is protected !!