ಅರಸಿನಮಕ್ಕಿಯಲ್ಲಿ ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ

Kokkada

ಅರಸಿನಮಕ್ಕಿಯಲ್ಲಿ ಯುವ ಶಿಕ್ಷಕಿಯ ಶವ ಬಾವಿಯಲ್ಲಿ ಪತ್ತೆ

ಕೊಕ್ಕಡ: ಅರಸಿನಮಕ್ಕಿ ಗ್ರಾಮದ ಬೂಡುಮುಗೇರು ನಿವಾಸಿ ಹಾಗೂ ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತೇಜಸ್ವಿನಿ (23) ಅವರ ಶವ ಬಾವಿಯಲ್ಲಿ ಪತ್ತೆಯಾದ ಘಟನೆ ಅ.23ರಂದು ಬೆಳಕಿಗೆ ಬಂದಿದೆ.

ಮೂಲಗಳ ಪ್ರಕಾರ, ತೇಜಸ್ವಿನಿ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಆದರೆ ಅವರು ಕಾಲು ಜಾರಿ ಬಾವಿಗೆ ಬಿದ್ದರೋ ಅಥವಾ ಆತ್ಮಹತ್ಯೆ ಮಾಡಿಕೊಂಡರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ನಿಖರ ಕಾರಣ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ತನಿಖೆ ಮುಂದುವರಿದಿದೆ.

ಮೃತ ತೇಜಸ್ವಿನಿ ಅವರು ತಂದೆ, ತಾಯಿ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

  •  

Leave a Reply

You May Have Missed

error: Content is protected !!