ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, ಅಂಬ್ಯುಲೆನ್ಸ್ ವಶ

ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, ಅಂಬ್ಯುಲೆನ್ಸ್ ವಶ

ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, ಅಂಬ್ಯುಲೆನ್ಸ್ ವಶ

ನೆಲ್ಯಾಡಿ: ಕಡಬ ತಾಲೂಕಿನ ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು ಮಾಡಿದ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕಳವಾಗಿದ್ದ ಅಂಬ್ಯುಲೆನ್ಸ್ ವಶಪಡಿಸಿಕೊಂಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್(22ವ.)ಬಂಧಿತ ಆರೋಪಿ. ಶಿರಾಡಿ ನಿವಾಸಿ ಸುರೇಶ್ ಅವರು ತನ್ನ ಅಂಬ್ಯಲೆನ್ಸ್ ವಾಹನವನ್ನು ಪ್ರತಿ ದಿನ ರಾತ್ರಿ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ ಲಾಕ್ ಮಾಡಿ ಮನೆಗೆ ಹೋಗುತ್ತಿದ್ದರು. ಅದರಂತೆ ಡಿ.19ರಂದು ರಾತ್ರಿ ಎಂದಿನಂತೆ ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಿ, ಅಪಘಾತದ ಬಗ್ಗೆ ತುರ್ತು ಕರೆ ಬಂದಾಗ ಬದಲಿ ಚಾಲಕರ ಅನುಕೂಲತೆಗಾಗಿ ಅಂಬ್ಯಲೆನ್ಸ್ ಕೀಯನ್ನು ಅಂಬ್ಯುಲೆನ್ಸ್ ನಲ್ಲಿ ಇಟ್ಟು ಹೋಗಿದ್ದರು. ಮರುದಿನ ಡಿ.20ರಂದು ಬೆಳಿಗ್ಗೆ ಮನೆಯಿಂದ ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳಕ್ಕೆ ಬಂದು ನೋಡಿದಾಗ ಅಂಬ್ಯುಲೆನ್ಸ್ ಕಳವಾಗಿತ್ತು. ಈ ಬಗ್ಗೆ ಸುರೇಶ್ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಡಿ.20ರಂದು ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಆರೋಪಿ ಶೋದನ್‌ನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕಳವಾಗಿದ್ದ ಅಂಬ್ಯುಲೆನ್ಸ್ ಸ್ವಾಧೀನಪಡಿಸಿಕೊಂಡಿದ್ದಾರೆ.

  •  
Previous post

ಗುಂಡ್ಯ ಚೆಕ್‌ಪೋಸ್ಟ್ ಬಳಿ ನಿಲ್ಲಿಸಿದ್ದ ಅಂಬ್ಯುಲೆನ್ಸ್ ಕಳವು; ಪ್ರಕರಣ ದಾಖಲು

Next post

ನೆಲ್ಯಾಡಿ:ಯುನೈಟೆಡ್ ಕ್ರಿಸ್ಮಸ್ ಆಚರಣೆ–2025 ಪ್ರೀತಿ, ಸಹಾನುಭೂತಿ ಮತ್ತು ಸಾಮಾಜಿಕ ಬದ್ಧತೆಯ ಸಂದೇಶ- ಬಿಷಪ್ ಎಚ್.ಜಿ.ಯಾಕೋಬ್ ಮಾರ್ ಅಂತೋನಿಸ್

Leave a Reply

You May Have Missed

error: Content is protected !!