ಕರ್ನಾಟಕ
# accident #kadaba #shiradi #nellyady #ksrtc, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ಕೊಕ್ಕಡ ಅಭಿವೃದ್ಧಿಗೆ 102 ಕೋಟಿ ರೂಪಾಯಿ ಅನುದಾನ; ಪಂಚಾಯತ್ನಿಂದ ಶಾಸಕರಿಗೆ ಅಭಿನಂದನೆ



ಕೊಕ್ಕಡ: ಕಳೆದ ಐದು ವರ್ಷಗಳಿಂದ ಪಾರದರ್ಶಕ ಆಡಳಿತ ನಡೆಸಿದ ಹಿನ್ನೆಲೆಯಲ್ಲಿ ಮತ್ತು ಗ್ರಾಮದ ಸಮಗ್ರಾಭಿವೃದ್ಧಿಗಾಗಿ ಒಟ್ಟು 102 ಕೋಟಿಯ ಅನುದಾನವನ್ನು ಒದಗಿಸಿದ ಶಾಸಕ ಹರೀಶ್ ಪೂಂಜಾ ಅವರಿಗೆ ಅಮೃತ ಗ್ರಾಮ ಪಂಚಾಯತಿ ಕೊಕ್ಕಡ ವತಿಯಿಂದ ಶಾಸಕರ ಗೃಹಕಚೇರಿಯಲ್ಲಿ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಗ್ರಾಮ ಪಂಚಾಯತಿ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳ ವಿಸ್ತರಣೆ ಮತ್ತು ಅಭಿವೃದ್ಧಿ ಯೋಜನೆಗಳ ಕುರಿತು ಶಾಸಕರೊಂದಿಗೆ ಚರ್ಚೆ ನಡೆಸಿದ್ದು, ಅದರ ಅನುಷ್ಠಾನಕ್ಕೆ ಶಾಸಕರು ಅಗತ್ಯ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷರು ಪ್ರಭಾಕರ ಗೌಡ, ಗ್ರಾಮ ಪಂಚಾಯತಿ ನಿಕಟಪೂರ್ವ ಅಧ್ಯಕ್ಷರು ಯೋಗೀಶ್ ಆಳಂಬಿಲ, ಸದಸ್ಯರಾದ ವಿಶ್ವನಾಥ್ ಕಕ್ಕುದೊಲಿ, ಜಗದೀಶ್ ಕೆಂಪಕೋಡಿ, ಪವಿತ್ರ, ಕೆ., ಲತಾ, ಮಾಜಿ ಸದಸ್ಯೆ ಲಕ್ಷ್ಮೀ ಅಡೈ, ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಎಸ್ ಟಿ ಮೋರ್ಚಾ ಮಂಡಲ ಕಾರ್ಯದರ್ಶಿ ವಿಠಲ್ ಕುರ್ಲೆ, ಬೂತ್ ಅಧ್ಯಕ್ಷ ಕಿರಣ್ ಬಾಲ್ತಿಮಾರ್, ಕಾರ್ಯದರ್ಶಿ ರವಿಚಂದ್ರ ಪೊಡಿಕೆತ್ತೊರು ಸೇರಿದಂತೆ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.





















Leave a Reply