ದೇಶ / ವಿದೇಶ
# accident #kadaba #shiradi #nellyady #ksrtc, #KOKKADA: ಶಿಬಾಜೆ ಶ್ರೀಧರ ಕೊಲೆ ಪ್ರಕರಣಕ್ಕೆ ಮರು ತನಿಖೆ — ರಾಜ್ಯ ಸರ್ಕಾರದಿಂದ ಎಸ್ಐಟಿ ನೇಮಕ, #ಅರಸಿನಮಕ್ಕಿ ಬೂಡುಮುಗೇರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶೀರೂರು ಶ್ರೀ ವೇದವರ್ಧನ ಸ್ವಾಮೀಜಿ ಭೇಟಿ – ಪೂರ್ಣ ಕುಂಭ ಸ್ವಾಗತ, #ಉಜಿರೆ ಎಸ್ಡಿಎಂ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಸಮಾರೋಪ, #ಉದನೆ ಸೈಂಟ್ ಆಂಟನೀಸ್ ವಿದ್ಯಾಸಂಸ್ಥೆಯಲ್ಲಿ ಪ್ರತಿಭಾ ದಿನೋತ್ಸವ, #ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, #ಕುಡ್ತಾಜೆ: ಶ್ರೀ ಉಳ್ಳಾಕ್ಲು ರುದ್ರ ಚಾಮುಂಡಿ, #ಗುಂಡ್ಯ: ಅಂಬ್ಯುಲೆನ್ಸ್ ವಾಹನ ಕಳವು ಪ್ರಕರಣ: ಆರೋಪಿ ಹಾಸನದಲ್ಲಿ ಬಂಧನ, #ಚಲನಚಿತ್ರ ನಟಿ ಶ್ರುತಿ ಕುಕ್ಕೆ ಸುಬ್ರಹ್ಮಣ್ಯ ಭೇಟಿ, #ಜ.22ರಂದು ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ, #ನೆಲ್ಯಾಡಿ ನಿವಾಸಿ ಕೆ.ಸಿ. ವರ್ಗೀಸ್ ಸಾವು ಪ್ರಕರಣ – ಶವ ಪರೀಕ್ಷೆಯಲ್ಲಿ ಬಯಲಾದ ರಹಸ್ಯ: ಬಲವಾದ ಪೆಟ್ಟುಗಳಿಂದ ಮರಣ, #ನೆಲ್ಯಾಡಿ: ಎಸ್ಸಿ/ಎಸ್ಟಿ ಫಲಾನುಭವಿಗಳಿಗೆ ಟ್ಯಾಂಕ್, #ನೆಲ್ಯಾಡಿ: ಪರವಾನಗಿ ಇಲ್ಲದೆ ಅಕ್ರಮ ಮರ ಸಾಗಾಟ ಪತ್ತೆ: ಲಾರಿ, #ರಾಮಕುಂಜ: ಬಾವಿ ತೋಡಲು ಸ್ಪೋಟಕ ಬಳಕೆ, #ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು – 11 ಕೆವಿ ಕಂಬ ತುಂಡು
0 Comments
ಟ್ರಾಫಿಕ್ ರೂಲ್ಸ್ ಉಲ್ಲಂಘನೆ: ಸುಳ್ಯ ಯುವಕನಿಗೆ ದಂಡ, 15 ದಿನ ಸಮುದಾಯ ಸೇವೆ ಹಾಗೂ ಚಾಲನಾ ಪರವಾನಗಿ ಅಮಾನತು ಶಿಕ್ಷೆ





ಸುಳ್ಯ: ಸುಳ್ಯ ಪೇಟೆಯಲ್ಲಿ ಹಲವು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುತ್ತಿದ್ದ ಸುಳ್ಯ ನಿವಾಸಿ ರಕ್ಷಿತ್ ಜಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮಾ.12ರಂದು ಸುಳ್ಯ ಪೇಟೆಯಲ್ಲಿ ಸಂಚಾರ ನಿಯಮಗಳನ್ನು ಮರುಮರು ಉಲ್ಲಂಘಿಸುತ್ತಿದ್ದ ಹಿನ್ನೆಲೆಯಲ್ಲಿ ರಕ್ಷಿತ್ ಜಿ ಎಂಬುವನ ಮೇಲೆ ಐಎಂವಿ ಆ್ಯಕ್ಟ್ ಅಡಿಯಲ್ಲಿ ಕಲಂ 119 R/w 177, 184, 194(C) ಪ್ರಕಾರ ಮೂರು ಪ್ರತ್ಯೇಕ ಲಘು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂತೋಷ್ ಬಿ.ಪಿ ಅವರು ಮಾನ್ಯ ಎಸ್ಸಿ ಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ, ಸುಳ್ಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಪ್ರಕರಣವು ಸಿ.ಸಿ. 42/26, 43/26 ಮತ್ತು 44/26 ಸಂಖ್ಯೆಯಲ್ಲಿ ವಿಚಾರಣೆಗೊಂಡು, ನ್ಯಾಯಾಲಯವು ಆರೋಪಿಗೆ ಎರಡು ಪ್ರಕರಣಗಳಲ್ಲಿ ಒಟ್ಟು ₹3,000 ದಂಡ ವಿಧಿಸಿದೆ. ಜೊತೆಗೆ ಮೂರು ಪ್ರಕರಣಗಳಲ್ಲಿ ತಲಾ ಐದು ದಿನಗಳಂತೆ ಒಟ್ಟು 15 ದಿನಗಳ ಕಾಲ (ದಿ.15-03-2026ರಿಂದ ದಿ.29-03-2026ರವರೆಗೆ) ಸಮುದಾಯ ಸೇವೆ ನಿರ್ವಹಿಸಲು ಆದೇಶಿಸಿದೆ.
ಸಮುದಾಯ ಸೇವೆಯ ಭಾಗವಾಗಿ ಸಂಚಾರ ನಿಯಮಗಳ ಬಗ್ಗೆ ಮಾಹಿತಿ ಹೊಂದಿದ ಫಲಕಗಳನ್ನು ಹಿಡಿದು ಸುಳ್ಯ ಪೇಟೆಯ ಪ್ರಮುಖ ಜಂಕ್ಷನ್ಗಳಲ್ಲಿ ನಿಂತು ಸಾರ್ವಜನಿಕರಿಗೆ ಸಂಚಾರ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಇದಲ್ಲದೆ ಆರೋಪಿತನ ಚಾಲನಾ ಪರವಾನಗಿಯನ್ನು ಮೂರು ತಿಂಗಳ ಕಾಲ ಅಮಾನತಿನಲ್ಲಿ ಇಡುವಂತೆ ನ್ಯಾಯಾಲಯ ಆದೇಶಿಸಿದೆ.





















Leave a Reply